ವಚನ ದಾಸೋಹ

ವಚನ:
ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ.
ಶಿವಭಕ್ತರು ಪರಿಣಾಮಿಸಿದಡೆ, ಶಿವನು ಪರಿಣಾಮಿಸುವ ನೋಡಾ.
ಭಕ್ತದೇಹಿಕದೇವನೆಂದು ಶ್ರುತಿ ಹೊಗಳುವ ಕಾರಣ,
ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ನೋಡಾ.
ತಾಯಿನೊಂದಡೆ ಒಡಲಶಿಶು ನೋವತೆರನಂತೆ,
ಭಕ್ತರು ನೊಂದಡೆ ತಾ ನೋವ ನೋಡಾ ಚೆನ್ನಮಲ್ಲಿಕಾರ್ಜುನ. / 378
- ವೀರ ವಿರಾಗಿಣಿ ಅಕ್ಕ ಮಹಾದೇವಿ

Comments